ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆಗೆ ಸಕಲ ಸಿದ್ಧತೆ

ಬಾಗಲಕೋಟೆ,ಜು20 : ಜಿಲ್ಲೆಯಲ್ಲಿ ಆಗಸ್ಟ 15 ರಂದು ಜರುಗಲಿರುವ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಸ್ವಾತಂತ್ರೋತವ ದಿನಾಚರಣೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ರಚಿಸಲಾದ ವಿವಿಧ ಸಮಿತಿಗಳ ಸಿದ್ದತೆ ಕುರಿತು ಚರ್ಚಿಸಿದರು. ಯಾವುದೇ ರೀತಿಯ ಅಡತಡೆಯಾಗದಂತೆ ಎಲ್ಲ ರೀತಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಆಗಸ್ಟ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗುವ ಧ್ವಜಾರೋಜಹಣ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಅಗತ್ಯ ಸಿದ್ದತೆ ಕೈಗೊಳ್ಳಲು ಸೂಚಿಸಿದರು. ಪೆÇೀಲಿಸ್, ಗೃಹರಕ್ಷಕದಳ, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಾಜಿ ಸೈನಿಕರ ತಂಡ ಒಳಗೊಂಡಂತೆ ಆಕರ್ಷಕ ಪಥಸಂಚಲನ ಹಮ್ಮಿಕೊಳ್ಳಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಗುತ್ತಿದೆ ಎಂದರು.
ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ವಹಿಸಿದ ಜವಾಬ್ದಾರಿಯನ್ನು ತಪ್ಪದೇ ಪಾಲಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಲು ಸೂಚಿಸಿದ ಅವರು ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೆÇೀಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಿದರೆ, ಬಂದೂಬಸ್ತಿ ವ್ಯವಸ್ಥೆಗೆ ಪೆÇೀಲಿಸ್ ಇಲಾಖೆಗೆ ತಿಳಿಸಲಾಯಿತು. ಜಿಲ್ಲಾ ಕ್ರೀಡಾಂಗಣ ಸ್ವಚ್ಛತೆಗೆ ನಗರಸಭೆಗೆ ಸೂಚಿಸಲಾಯಿತು.
ಕ್ರೀಡಾಂಗಣದಲ್ಲಿ ಸ್ಟೇಜ್ ನಿರ್ಮಾಣ, ಗಣ್ಯರಿಗೆ, ಶಾಸಕರಿಗೆ, ಸಂಸದರುಗಳಿಗೆ ಹಾಗೂ ಸನ್ಮಾನಿತರಿಗೆ, ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆ ಕೈಗೊಳ್ಳಲು ಸೂಚಿಸಿದರು. ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಮಕ್ಕಳಿಗೆ ಸಹಿ ವಿತರಣೆ ಕ್ರಮವಹಿಸಬೇಕು. ವೇದಿಕೆ ಮೇಲೆ ಗಣ್ಯವ್ಯಕ್ತಿಗಳಿಗೆ ಆಸನಗಳ ವ್ಯವಸ್ಥೆ ಹಾಗೂ ವೇದಿಕೆಯ ಎರಡು ಕಡೆಗಳಲ್ಲಿ ಅಧಿಕಾರಿಗಳಿಗೆ, ಸನ್ಮಾನಿತರಿಗೆ ಹಾಗೂ ಪತ್ರಕರ್ತರಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಬೇಕು ಎಂದರು. ಜಿಲ್ಲಾಡಳಿತ ಭವನ ಸೇರಿದಂತೆ ತಾಲೂಕ ಆಡಳಿತ ಭವನ, ಜಿಲ್ಲಾ ಕ್ರೀಡಾಂಗಣಕ್ಕೂ ವಿದ್ಯುತ್ ಅಲಂಕಾರ ಮಾಡುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಯುಕೆಪಿಯ ಮಹಾವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಗೃಹರಕ್ಷಕದಳ, ಭಾರತ ಸೇವಾದಳ ಹಾಗೂ ಕಂದಾಯ ಇಲಾಖೆಯ ಮಂಜುನಾಥ ಬಂಡರಗಲ್ಲ ಉಪಸ್ಥಿತರಿದ್ದರು.