ಸರಳವಾಗಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ಕಲಬುರಗಿ,ಏ.27:ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಗುರುವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.

ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗೀರಥ ಮಹರ್ಷಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕಿ ಜಗದೀಶ್ವರಿ ಶಿವಕೇರಿ ಸೇರಿದಂತೆ ಅತಿಥಿ ಗಣ್ಯರು ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಗೋಪಣ್ಣ ದೊಡ್ಡಮನಿ, ಜಗನ್ನಾಥ ಕೋರಳ್ಳಿ, ಮಲ್ಲಿಕಾರ್ಜುನ ಕೋರಳ್ಳಿ, ನರಸಪ್ಪ ಜಡಿ, ಅಶೋಕ ಚೂರಿ, ಶಶಿಕಾಂತ ಗನ್ನೂರೆ, ರಾಘವೇಂದ್ರ, ಶ್ರೀಶೈಲ ಕೋರಳ್ಳಿ, ಗೋಪನ್ನ ನಿರಡಗಿ, ಗುರುನಾಥ ಆರ್.ಹೆಚ್., ಮೌನೇಶ ಜಿ. ಪೂಜಾರಿ, ಅನಂತರಾಜ, ವೆಂಕಟೇಶ, ರಾಘವೇಂದ್ರ, ಕೃಷ್ಣಾ, ಮಹಾದೇವಪ್ಪ ಜೆ. ಉಪ್ಪಾರ, ಭೀಮಪ್ಪ ಶಾಲಿ ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು.