ಸರಳಾದೇವಿ ಕಾಲೇಜಿನಲ್ಲಿ ಮಹಾವೀರ ಜಯಂತಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.04:  ನಗರದಸರಳದೇವಿ ಸತೀಶ್ಚಂದ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಇಂದು ಬೆಳಿಗ್ಗೆ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್.ಕೆ  ಮಂಜುನಾಥ ರೆಡ್ಡಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ಕಾಲೇಜಿನ  ಸಾಂಸ್ಕೃತಿಕ ಸಂಚಾಲಕ ಡಾ.ಶಶಿಕಾಂತ ಬಿಲ್ಲವ್, ಭೌತಶಾಸ್ತ್ರ  ವಿಭಾಗದ ಪ್ರಾಧ್ಯಾಪಕ ಡಾ. ಕುಂಚಂ ನರಸಿಂಹಲು, ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಗಿರೀಶ್ ಕುಮಾರ್ ಗೌಡ ಹಾಜರಿದ್ದರು.