ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ

ಕಲಬುರಗಿ:ಜು.24:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲಗಳಾದ ಭೀಮಾ, ಬೆಣ್ಣೆತೋರಾ ಹಾಗೂ ಭೋಸಗಾ ನದಿಗಳ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವ ಪ್ರಯುಕ್ತ ನಗರಕ್ಕೆ ಕುಡಿಯುವ ನೀರನ್ನು ಶುದ್ಧೀಕರಿಸಿ, ಸೂಪರ ಕ್ಯೂರಿನೇಶನ್ ಮಾಡಿಯೇ ನೀರು ಸರಬರಾಜು ಮಾಡಲಾಗುತ್ತಿದೆ. ಆದ್ಯಾಗೂ ಸಹ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ, ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ನಗರದ ಸಾರ್ವಜನಿಕರು ತಮ್ಮ ಮನೆಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಗಳನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು ಮತ್ತು ನಳದ ತಗ್ಗುಗಳನ್ನು ಮುಚ್ಚಬೇಕು. ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೆ ನಳದ ತೊಟ್ಟಿಯ ಮುಖಾಂತರ ಗ್ರಾಹಕರಿಗೆ ತಲುಪಿ ಇದರಿಂದ ಕೂಡಾ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಇರುತ್ತದೆ. ಇದರಿಂದ ನೀರು ಪೋಲಾಗದಂತೆ ನೋಡಿಕೊಳ್ಳಬಹುದಾಗಿದೆ. ಸಾರ್ವಜನಿಕರು ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಹಾಗೂ ಮೆ|| ಎಲ್ ಆಂಡ್ ಟಿ ಲಿಮಿಟೆಡ್‍ರವರೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.