ಕೋಲಾರ, ಜೂ.೧೪:ಪ್ರಜಾಯಾತ್ರೆ ಸಮಾವೇಶಗಳಲ್ಲಿ ಸಾವಿರಾರು ಮಹಿಳೆಯರ ಸಮ್ಮುಖದಲ್ಲಿ ನಮ್ಮ ಪಕ್ಷಕ್ಕೆ ನೀವು ಮತ ನೀಡಿದರೆ ಸಹಕಾರ ಬ್ಯಾಂಕ್ಗಳಲ್ಲಿ ಪಡೆದಿರುವ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುತ್ತೇವೆಂಧು ಮಾತು ನೀಡಿ ಮತ ಪಡೆದ ಸಿದ್ದರಾಮಯ್ಯನವರ ಸರ್ಕಾರ ಸ್ತ್ರೀಶಕ್ತಿ ಸಾಲ ಮನ್ನಾ ಮಾಡದೆ ಇರುವುದು ಮಹಿಳೆಯರಿಗೆ ಮಾಡಿದ ದ್ರೋಹವನ್ನು ಸ್ತ್ರೀ ಶಕ್ತಿಗಳು ಖಂಡಿಸಿ ಹೊಸಮಟ್ನಹಳ್ಳಿ ಮತ್ತು ಮಂಗಸಂದ್ರ ಗ್ರಾಮಗಳಲ್ಲಿ ನಮ್ಮ ಸಂಘಗಳ ಸಾಲ ವಸೂಲಾತಿಗೆ ಬರಬೇಡಿ ಎಂದು ಬೋರ್ಡ ಹಾಕಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಸಂಘಟನೆಯ ನಳಿನಿಗೌಡ ಮಾತನಾಡಿ ಸಿದ್ದರಾಮಯ್ಯನವರೇ, ಕೊಟ್ಟ ಮಾತಿನಂತೆ ನಡೆಯುವ ನೀವು ಮಹಿಳೆಯರ ಸ್ತ್ರೀಶಕ್ತಿ ಸಾಲ ಮನ್ನಾ ಮಾಡದಿರಲು ಕಾರಣವೇನು? ಇಡೀ ರಾಜ್ಯದಲ್ಲಿ ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲ ಅಹಿಂದ ವರ್ಗದ ಹಾಗೂ ಬಡ ರೈತಾಪಿ ಕುಟುಂಬಗಳ ಹೆಣ್ಣು ಮಕ್ಕಳೇ ಹೊರತು ಶ್ರೀಮಂತರಲ್ಲ ಸಿದ್ದರಾಮಯ್ಯ ಅವರು ಅರ್ಥ ಮಾಡಿ ಕೊಳ್ಳಬೇಕೆಂದರು.
ದೇವರು ವರ ಕೊಟ್ಟರೂ ಪೂಜಾರಿ ಕೊಡ ಎಂಬ ಗಾದೆ ಮಾತಿನಂತೆ ಸಿದ್ದರಾಮಯ್ಯನವರು ಸಾಲ ಮನ್ನಾ ಮಾಡಲು ರೆಡಿಯಾಗಿದ್ದರೂ ಜಿಲ್ಲೆಯ ಕೆಲವು ಅಘೋಷಿತ ಕಾಂಗ್ರೆಸ್ ನಾಯಕರು ಮತ್ತು ಸಹಕಾರಿ ಸಂಘಗಳಲ್ಲಿರುವ ಕೆಲವು ವ್ಯಕ್ತಿಗಳು ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡಿದರೆ ಯಾರಿಗೋ ಸಾಲ ಮನ್ನಾ ಮಾಡಿಸಿದ ಕೀರ್ತಿ ಬಂದು ಬಿಡುತ್ತೆ ಎಂಬ ದುರುದ್ದೇಶ ಇಟ್ಟುಕೊಂಡು ಮುಖ್ಯಮಂತ್ರಿಗಳಿಗೆ ಇಲ್ಲಸಲ್ಲದ ದೂರುಗಳನ್ನು ಹೇಳಿ ದಿಕ್ಕು ತಪ್ಪಿಸುವ ಕೆಲಸ ಮಾಡಿ ಸಾಲ ಮನ್ನಾ ಮಾಡದಂತೆ ಮಾಡಿರುವ ಮುಖಂಡರ ವರ್ತನೆಯೂ ಇದೇ ರೀತಿ ಮುಂದುವರೆದರೆ ಮಹಿಳೆಯರೇ ಬುದ್ದಿ ಕಲಿಸ ಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಂಗಸಂದ್ರ ಚೌಡಮ್ಮ ಮಾತನಾಡಿ ಸಹಕಾರಿ ಬ್ಯಾಂಕ್ಗಳ ಸಿಬ್ಬಂದಿಗಳು ಏನಾದರೂ ಸಾಲ ವಸೂಲಿಗೆ ನಮ್ಮ ಮನೆ ಬಾಗಿಲಿಗೆ ಬಂದು ದೌರ್ಜನ್ಯ ಮಾಡಿದರೆ ನಂತರ ಉಂಟಾಗುವಂತ ಅನಾಹುತಗಳಿಗೂ ಸಿದ್ದರಾಮಣ್ಣ ನೀವೇ ಜವಬ್ದಾರಿ ಆಗಿರುತ್ತೀರಿ
ಪ್ರತಿಭಟನೆಯಲ್ಲಿ ರತ್ನಮ್ಮ, ಚೌಡಮ್ಮ, ನಳಿನಿ, ಪ್ರಮೀಳಾದೇವಿ, ಮಂಜುಳಾ ಕಾವ್ಯ, ಶಕುಂತಲ, ಶಾರದಮ್ಮ, ಸುರೇಖಾ, ಮುನಿಯಮ್ಮ, ವೆಂಕಟಮ್ಮ, ಸುನಿತಾ, ಸುಧಾ,ಅನಿತಾ, ರಾಮಕ್ಕ, ಪಾರ್ವತಿ, ಲಕ್ಷಮ್ಮ, ಜಯಲಕ್ಷ್ಮೀ, ಪದ್ಮಮ್ಮ, ರಾಧ, ಶೋಭ, ಮುಂತಾದ ನೂರಾರು ಮಹಿಳಾ ಸಂಘದ ಸದಸ್ಯರು ಇದ್ದರು