ಸಿಡಿಲು ಬಡಿದು ಮಹಿಳೆ ಸಾವು

ಅಫಜಲಪುರ:ಸೆ.3: ತಾಲೂಕಿನ ಸಿಧನೂರ ಗ್ರಾಮದ ಹೊರವಲಯದ ಜಮೀನಿನಲ್ಲಿ ಶನಿವಾರ ಸಾಯಂಕಾಲ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಲಾವತಿ ಗಂ. ವಿಜಯಕುಮಾರ ಚಿಕ್ಕರೇವೂರ ಆಕಸ್ಮಿಕ ಸಿಡಿಲು ಬಡಿತದಿಂದ ಸಾವನ್ನಪ್ಪಿದ್ದಾರೆ ಹಾಗೂ ಅವರ ಹತ್ತಿರದ ಸಂಬಂಧಿ ಸವಿತಾ ಗಂ. ಸಂಜೀವಕುಮಾರ ಚಿಕ್ಕರೇವೂರ ಇವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ತಹಸೀಲ್ದಾರ ಸಂಜೀವಕುಮಾರ ದಾಸರ್ ಹಾಗೂ ಪೆÇಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯು ಅಫಜಲಪುರ ತಾಲೂಕಿನ ರೇವೂರ(ಬಿ) ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.