
ಬೀದರ್:ಸೆ.13: ನಗರದ ಸಿದ್ಧಾರೂಢ ಮಠದಲ್ಲಿ ಗುರುವಾರ (ಸೆ. 14) ಶ್ರಾವಣ ಪ್ರವಚನ ಸಮಾರೋಪಗೊಳ್ಳಲಿದೆ.
ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಬೆಳಿಗ್ಗೆ 10ಕ್ಕೆ ಭಜನೆ, ಬೆಳಿಗ್ಗೆ 11ಕ್ಕೆ ಸಿದ್ಧಾರೂಢರಿಗೆ ಅಭಿಷೇಕ, ಶ್ರೀಗಳ ಪಾದಪೂಜೆ, ಮಧ್ಯಾಹ್ನ 12ಕ್ಕೆ ಪ್ರವಚನ, ಬಳಿಕ ಮಹಾ ಪ್ರಸಾದ ವಿತರಣೆ ನಡೆಯಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದ್ಗುರು ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಕೋರಿದ್ದಾರೆ.