
ಬೆಳಗಾವಿ,ಮಾ.೮- ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನ ಎದೆಗೆ ಸ್ಕ್ರೂಡ್ರೈವರ್ನಿಂದ ಚುಚ್ಚಿ ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದಲ್ಲಿರುವ ಮಚ್ಚೆ ಬಳಿ ಯಳ್ಳೂರ ರಸ್ತೆಯಲ್ಲಿ ನಡೆದಿದೆ.
ಮಜಗಾಂವ ಗ್ರಾಮದ ಪ್ರತೀಕ್ ಲೋಹಾರ್ (೨೧) ಹತ್ಯೆಯಾದ ಯುವಕನಾಗಿದ್ದು,ಆತ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಹೋಗುವಾಗ ಕೊಲೆ ಮಾಡಲಾಗಿದೆ. ಪ್ರತೀಕ್ ಸ್ನೇಹಿತನ ಜೊತೆಗೆ ಕೆಲವರು ಜಗಳ ಆಡುತ್ತಿದ್ದರು. ಈ ವೇಳೆ ಜಗಳ ಬಿಡಿಸಲು ಹೋಗಿದ್ದ ಪ್ರತೀಕ್ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಈ ಹಿಂದೆ ಹಲವು ಬಾರಿ ದುಷ್ಕರ್ಮಿಗಳು ಪ್ರತೀಕ್ ಜತೆಗೆ ಜಗಳವಾಡಿ ಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆತ ಜಗಳ ಬಿಡಿಸಲು ಬರುತ್ತಿದ್ದಂತೆ ಪ್ರತೀಕ್ನನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಬೈಕ್ನಲ್ಲಿದ್ದ ಸ್ಕ್ರೂಡ್ರೈವರ್ನಿಂದ ಎದೆಗೆ ಚುಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.