ಹಣ ಬಿಡುಗಡೆ ಸಮಿತಿ ಸಭೆ

ಮಂಡ್ಯ.ಮೇ.24:- ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ 2023 ರ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ವಿವಿಧ ಪ್ರಕರಣಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ನಗದು ಹಣ ಜಪ್ತಿ ಮಾಡಲಾಗಿದ್ದು, ಕುರಿತಂತೆ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಹಣ ಬಿಡುಗಡೆ ಸಮಿತಿಯ ಸಭೆ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ಹಣ ಬಿಡುಗಡೆ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲೆಯಲ್ಲಿ 21 ಪ್ರಕರಣಗಳಲ್ಲಿ 2 ಪ್ರಕರಣಗಳನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಹಿಸಲಾಗಿರುತ್ತದೆ ಉಳಿದ 19 ಪ್ರಕರಣಗಳಲ್ಲಿ 11 ಪ್ರಕರಣವನ್ನು ಕಳೆದ ಬಾರಿ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಂಡು ವಾರಸುದಾರರಿಗೆ ಹಣ ಹಿಂತಿರುಗಿಸಿದ್ದೇವೆ ಎಂದರು.
ಇಂದಿನ ಸಭೆಯಲ್ಲಿ 4 ಪ್ರಕರಣಗಳಲ್ಲಿ ಒಟ್ಟು 11 ಲಕ್ಷಕ್ಕೂ ಹೆಚ್ಚಿನ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಉಳಿದಂತೆ 4 ಪ್ರಕರಣಗಳನ್ನು ವಾರಸುದಾರರು ಸೂಕ್ತ ದಾಖಲೆ ಒದಗಿಸಿದ ನಂತರ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಖಜಾನೆಯ ಉಪ ನಿರ್ದೇಶಕ ಸಿದ್ದಲಿಂಗಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಧನಂಜಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.