
ಜೈಪುರ,ಆ.3- ಹರಿಯಾಣದಲ್ಲಿನ ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಗಮನವನ್ನು ಬೇರೆಡೆ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹರಿಹಾಯ್ದಿದ್ದಾರೆ.
ಜುನೈದ್ ಮತ್ತು ನಾಸಿರ್ ಹತ್ಯೆಯ ಶಂಕಿತರನ್ನು ಬಂಧಿಸಲು ಪೊಲೀಸ್ ತಂಡ ಹರಿಯಾಣದ ನುಹ್ ಜಿಲ್ಲೆಗೆ ತೆರಳಿದಾಗ ರಾಜಸ್ಥಾನ ಪೊಲೀಸ್ ತಂಡದ ವಿರುದ್ಧ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ ಎಂದು ತನಿಖೆಗೆ ಸಹಕಾರ ನೀಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಆರೋಪಿಗಳು ಸೋದರ ಸಂಬಂಧಿಗಳಾಗಿದ್ದು, ಫೆಬ್ರವರಿ 16 ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದಲ್ಲಿ ಪತ್ತೆಯಾಗಿದ್ದಾರೆ. ಮೃತರ ಕುಟುಂಬಗಳು ಅವರನ್ನು ಬಜರಂಗದಳದ ಸದಸ್ಯರು ಅಪಹರಿಸಿ, ಹೊಡೆದು ಮತ್ತು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಎನ್ನುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಭಜರಂಗದಳದ ಸದಸ್ಯ ಮೋನು ಮಾನೇಸರ್ ಅವರನ್ನು ಬಂಧಿಸಲು ರಾಜಸ್ಥಾನ ಪೊಲೀಸರು ಸ್ವತಂತ್ರರು ಎಂಬ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ದ್ವಂದ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.
ರಾಜ್ಯದ ಪಿರುಕಾ ಅರಣ್ಯದ ಬಳಿ ಇಬ್ಬರನ್ನು ಅಪಹರಿಸಿ ಮೊದಲು ಹಲ್ಲೆ ನಡೆಸಿದ್ದರಿಂದ ರಾಜಸ್ಥಾನ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ. ಭಿವಾನಿಯಲ್ಲಿ 165 ಕಿಮೀ ದೂರದಲ್ಲಿ ಅವರ ಶವಗಳು ಹೇಗೆ ಪತ್ತೆಯಾಗಿವೆ ಎಂಬುದು ಸ್ಪಷ್ಟವಾಗಿಲ್ಲ ಎಂದು ತಿಳಿಸಿದ್ದಾರೆ.
ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರಾಜಸ್ಥಾನ ಪೊಲೀಸರಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡುವುದಾಗಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ.
ರಾಜಸ್ತಾನದ ಪೊಲೀಸರು ನಾಸಿರ್-ಜುನೈದ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೋದಾಗ ಹರಿಯಾಣ ಪೊಲೀಸರು ಸಹಕರಿಸಲಿಲ್ಲ. ರಾಜಸ್ಥಾನ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎನ್ನುವ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಲು ಹರಿಯಾಣ ಪೊಲೀಸರು ರಾಜಸ್ಥಾನ ಪೊಲೀಸರೊಂದಿಗೆ ಸಹಕರಿಸುತ್ತಿಲ್ಲ ಎಂದು ದೂರಿದ್ದಾರೆ.
ಹರಿಯಾಣದಲ್ಲಿ ಹಿಂಸಾಚಾರವನ್ನು ತಡೆಯಲು ವಿಫಲರಾಗಿದ್ದಾರೆ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದೂರಿದ್ದಾರೆ.
ಈ ವರ್ಷದ ಫೆಬ್ರುವರಿಯಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆಗೆ ಬೇಕಾಗಿದ್ದ ಮೋನು ಮಾನೇಸರ್ನ ಮೇಲೆ ತಮ್ಮ ಸರ್ಕಾರ ಸುಲಭವಾಗಿ ಹೋಗಿದೆ ಎಂಬ ಟೀಕೆಗೆ ಹರಿಯಾಣ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ ಒಂದು ದಿನದ ನಂತರ ಗೆಹ್ಲೋಟ್ ಅವರ ಖಂಡನೆ ಬಂದಿದೆ, ರಾಜಸ್ಥಾನ ಪೊಲೀಸರು ಮೋನು ಮಾನೇಸರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಸ್ವತಂತ್ರರು ಎಂದು ಹೇಳಿದರು.