ಹಾಡಹಗಲೇ ರೌಡಿಶೀಟರ್‌ ಬರ್ಬರ ಕೊಲೆ

ಹಾಸನ,ಜು.4- ಜಿಲ್ಲೆಯಲ್ಲಿ ಹಾಡಹಗಲೇ ರೌಡಿಶೀಟರ್‌ನ ಬರ್ಬರ ಕೊಲೆಯಾಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ,ಚನ್ನರಾಯಪಟ್ಟಣದ
ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಯೊಬ್ಬ ನನ್ನು ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ.
ಮಾಸ್ತಿಗೌಡ (30) ಕೊಲೆಯಾದ ರೌಡಿಶೀಟರ್ ಆಗಿದ್ದು, ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗ ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳು ಕೊಲೆ ‌ಕೃತ್ಯ ನಡೆಸಿ ಪರಾರಿಯಾಗಿದ್ದಾರೆ. ಮಾಸ್ತಿಗೌಡ ,ಚನ್ನರಾಯಪಟ್ಟಣ ತಾಲ್ಲೂಕಿನ ಹೊನ್ನಮಾರನಹಳ್ಳಿ ಗ್ರಾಮದವನಾಗಿದ್ದಾನೆ. ಹಲವು ಕೃತ್ಯಗಳ್ಲಲಿ ಈತನ ಹೆಸರಿದ್ದು, ರೌಡಿಶೀಟರ್ ಆಗಿದ್ದ. ಮಧ್ಯ ಪೇಟೆಯಲ್ಲಿ ನಡೆದ ಬರ್ಬರ ಹತ್ಯೆಯಿಂದ ಚನ್ನರಾಯಪಟ್ಟಣ ಜನತೆ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.