ಹಿರಿಯರಿದ್ದೀರಿ ಬೇರೆಯವರಿಗೆ ಅವಕಾಶ ಕೊಡಿ, ಶೆಟ್ಟರ್ ಗೆ ವರಿಷ್ಠರ ಸೂಚನೆ

ಹುಬ್ಬಳ್ಳಿ ಏ.11-ನೀವುಹಿರಿಯರಿದ್ದೀರಿ ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್​ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಅವರಿಗೆ ನಿರ್ದೇಶನ ನೀಡಿದೆ.
ಈ ವಿಷಯವನ್ನು ಶೆಟ್ಡರ್ ಅವರೇ ಬಹಿರಂಗ ಪಡಿಸಿದ್ದಾರೆ. ಹೈಕಮಾಂಡ್ ಸೂಚನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ​ ನನಗೆ ವರಿಷ್ಠರಿಂದ ಪೋನ್ ಬಂದಿದ್ದು ಸತ್ಯ. ನೀವು ಹಿರಿಯರಿದ್ದೀರಿ, ಬೇರೆಯವರಿಗೆ ಅವಕಾಶ ಕೊಡಿ ಎಂದು ನನಗೆ ಹೈಕಮಾಂಡ್​ ಹೇಳಿದೆ. ಕಳೆದ 30 ವರ್ಷ‌ಗಳಿಂದ ನಾನೂ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಹೈಕಮಾಂಡ್​ಗೆ​ ತಿಳಿಸಿರುವುದಾಗಿ ಹೇಳಿದರು.
ನೂರಾರು ಜನರಿಗೆ ಟಿಕೆಟ್ ಕೊಡುವ ಕೆಲಸ ನಾನೂ ಮಾಡಿದ್ದೇನೆ. ನನಗೆ ಟಿಕೆಟ್ ನೀಡಬಾರದು ಎನ್ನಲ್ಲಿಕ್ಕೆ ಕಾರಣ ಏನು? ಸಮೀಕ್ಷೆಯಲ್ಲಿ ಪಾಸಿಟಿವ್ ಇದೆ. ನನ್ನ ಮೇಲೆ ಕಪ್ಪು ಚುಕ್ಕೆ ಇಲ್ಲ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಅದಕ್ಕಾಗಿ ಈ ಶಿಕ್ಷೆ ಏನು? ಹೈಕಮಾಂಡ್​​​ ಹೇಳಿದ್ದಕ್ಕೆ ನನ್ನ ಮನಸ್ಸಿಗೆ ಬೇಜಾರಾಗಿದೆ ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈಶ್ವರಪ್ಪನವರ ನಿಲುವೇ ಬೇರೆ, ತಮ್ಮ ನಿಲುವೆ ಬೇರೆ. ನಾನು ಸ್ಪರ್ಧಿಸಿ ಅತಿಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತೇನೆ. ಇನ್ನೂ ಹತ್ತು ವರ್ಷಗಳ ಕಾಲ ರಾಜಕಾರಣದಲ್ಲಿ ಇರುತ್ತೇನೆ. ರಾಕಕಾರಣದಿಂದ ಹಿಙದೆ ಸರಿಯುವ ಪ್ತಶ್ನೆಯಿಲ್ಲ ಎಂದು ಶೆಟ್ಟರ್ ಸ್ಪಷ್ಟಪಡಿಸಿದರು.