
ನವದಹೆಲಿ, ಸೆ.15-ಉಗ್ರರೊಂದಿಗಿನ ಗುಂಡಿನ ದಾಳಿಯಲ್ಲಿಹುತಾತ್ಮರಾದ ಕರ್ನಲ್ ಮನ್ಪ್ರೀತ್ ಸಿಂಗ್ ಪಾರ್ಥಿವ ಶರೀರಕ್ಕೆ ಅವರ 6 ವರ್ಷದ ಪುತ್ರ ಸೆಲ್ಯೂಟ್ ಮಾಡಿ ಭಾವಪೂರ್ಣ ಶ್ರದ್ಣಾಂಜಲಿ ಸಲ್ಲಿಸಿದ್ದಾನೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿಜಕ್ಕೂ ಮನಕಲಕುವಂತಿದೆ.
ಕಾಶ್ಮೀರದ ಅನಂತ್ನಾಗ್ನಲ್ಲಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹಾಗೂ ಒಬ್ಬ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದರು.ಅವರಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್ ಒಬ್ಬರು.
ಪಂಜಾಬ್ನ ಮೊಹಾಲಿ ಜಿಲ್ಲೆಯ ಮುಲ್ಲನ್ಪುರದಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್ ಅವರ ಅಂತ್ಯಸಂಸ್ಕಾರದ ವೇಳೆ ಪುತ್ರ ತನ್ನ ಪ್ರೀತಿಯ ತಂದೆ ಸೆಲ್ಯೂಟ್ ಮಾಡುವ ಮೂಲಕ ಅಂತಿಮ ವಿದಾಯ ಹೇಳಿದನು.
ಮನ್ಪ್ರೀತ್ ಸಿಂಗ್ ಅವರ ಕಳಢಬರವನ್ನು
ಮನೆಗೆ ತಂದಾಗ ಅವರ 6 ವರ್ಷದ ಪುತ್ರ ಸೇನಾ ಧಿರಿಸಿನಲ್ಲಿ ತಂದೆಯ ಪಾರ್ಥಿವ ಶರೀರಕ್ಕೆ ಸೆಲ್ಯೂಟ್ ಮಾಡಿದ. ಪುಟ್ಟ ಬಾಲಕನ ಪಕ್ಕದಲ್ಲಿ ಆತನಿಗಿಂತ 2 ವರ್ಷ ಚಿಕ್ಕವಳಾದ ಸಹೋದರಿ ಕೂಡ ನಿಂತಿದ್ದಳು. ಆಕೆಯೂ ಅಣ್ಣನಂತೆ ತಂದೆಯ ಪಾರ್ಥಿವ ಶರೀರಕ್ಕೆ ಸೆಲ್ಯೂಟ್ ಮಾಡಿದಳು.
ಇಬ್ಬರಿಗೂ ಕುಟುಂಬಕ್ಕೆ ಸಂಭವಿಸಿದ ದುರಂತದ ಬಗ್ಗೆ ತಿಳಿದಿರಲಿಲ್ಲ. ವೀರ ಯೋಧನಿಗೆ ಅಂತಿಮ ನಮನ ಸಲ್ಲಿಸಲು ಅಪಾರ ಜನಸ್ತೋಮ ನೆರೆದಿದ್ದರಿಂದ ಸ್ಥಳೀಯರು ಈ ಇಬ್ಬರು ಮಕ್ಕಳನ್ನು ಮೇಲಕ್ಕೆತ್ತಿ ತಂದೆಯ ಪಾರ್ಥಿವ ಶರೀರ ದರ್ಶನ ಮಾಡಿಸಿದರು.