
ಸಂಜೆವಾಣಿ ವಾರ್ತೆ
ಚಾಮರಾಜನಗರ, ನ.10- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು 60ನೇ ದಿನದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಳೇ ಬಟ್ಟೆ ಸರ್ಕಾರಎಂದುಆಕ್ರೋಶ ಹೊರಹಾಕಿದರು.
ಚಾಮರಾಜನಗರದಚಾಮರಾಜೇಶ್ವರದೇವಾಲಯದಿಂದಚಿಂದಿ ಬಟ್ಟೆಗಳನ್ನು ಹಿಡಿದುರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದತನಕ ಪ್ರತಿಭಟನಾರ್ಯಾಲಿ ನಡೆಸಿ ಸರ್ಕಾರಗಳ ವಿರುದ್ಧಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದಘೋಷಣೆಕೂಗಿದ ಪ್ರತಿಭಟನಾಕಾರರುಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಹಳೇ ಬಟ್ಟೆ ಸರ್ಕಾರವಾಗಿದೆ, ಅನ್ಯಾಯದಆದೇಶಕೊಡುತ್ತಿರುವಕಾವೇರಿ ನೀರು ನಿರ್ವಹಣಾ ಮಂಡಲಿ ಚಿಂದಿ ಸಮಿತಿಯಾಗಿದೆಎಂದುಆಕ್ರೋಶ ಹೊರಹಾಕಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವಕ್ರಮವನ್ನು ಖಂಡಿಸಿ 60 ದಿನಗಳಿಂದ ಹೋರಾಟ ಮಾಡಿಕೊಂಡು ಬದಲಾಗುತ್ತಿದೆ, ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವತನಕ ನಾವು ಪ್ರತಿಭಟನೆ ಮಾಡುತ್ತೇವೆಎಂದು ಪ್ರತಿಭಟನಾಕಾರರು ಹೆದ್ದಾರಿಯಲ್ಲಿಚಿಂದಿ ಬಟ್ಟೆ ಸುರಿದುಆಕ್ರೋಶ ಹೊರಹಾಕಿದರು.
ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇಕಾವೇರಿ ನೀರಿನ ವಿಚಾರದಲ್ಲಿಕ್ಯಾತೆತೆಗೆದುತೀಟೆ ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕುಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ರೈತರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೇಳಿಸಿಕೊಳ್ಳದ ಕಿವುಡು ಸರ್ಕಾರ ನಮ್ಮದಾಗಿದೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಚಾ.ರಂ.ಶ್ರೀನಿವಾಸಗೌಡ, ಶಾ. ಮುರಳಿ, ಚಾ.ವೆಂ. ರಾಜಗೋಪಾಲ್, ಗು. ಪುರುಷೋತ್ತಮ್, ನಿಜಧ್ವನಿ ಗೋವಿಂದರಾಜು, ಮಹೇಶ್ ಗೌಡ ಇನ್ನಿತರರು ಇದ್ದರು.