ಹೊರ ರಾಜ್ಯದಿಂದ ಮಹಿಳೆ ಕರೆತಂದು ಕೊಂದು ಸುಟ್ಟುಹಾಕಿದ ಹಂತಕರು

ಬೀದರ್, ಏ.25- ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವೈರ್ ಬಿಗಿದು ಮಹಿಳೆಯನ್ನು ಕೊಲೆ ಮಾಡಿ ಬಳಿಕ ಸುಟ್ಟು ಹಾಕಿದ ಘಟನೆ ತಾಲ್ಲೂಕಿನ ಮಂದಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಕಬ್ಬಿನ ಜಮೀನಿನಲ್ಲಿ ಘಟನೆ ವರದಿಯಾಗಿದೆ.
ತೆಲಂಗಾಣ್ ರಾಜ್ಯದ ಮೊಗಾ ಮದನೂರು ಗ್ರಾಮದ 38 ವರ್ಷದ ಮಹಿಳೆಯನ್ನು ನಗರಕ್ಕೆ ಕರೆದುಕೊಂಡು ಬಂದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೈದ ಆರೋಪಿಯೊಂದಿಗೆ ಮಹಿಳೆ ಅನೈತಿಕ ಸಂಬಂಧವನ್ನು ಹೊಂದಿದ್ದಳು ಎನ್ನಲಾಗಿದೆ. ಆಕೆಗೆ ಹಣ ನೀಡದ ಕಾರಣ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಆರೋಪಿ ಇನ್ನ ಒಬ್ಬರೊಂದಿಗೆ ಸೇರಿಕೊಂಡು ಆಕೆಯನ್ನು ಕೊಲೆ ಮಾಡಿರುವ ಕುರಿತು ಪೋಲಿಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ.
ಕೊಲೆಗೈದ ಮೂವರು ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಘಟನೆ ನಡೆಸ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಬಗದಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.