ಹೊಸಬರ ಬನ್ ಟೀ

ಯುವ ಉತ್ಸಾಹಿ ತಂಡದ ” ಬನ್ ಟೀ”  ಚಿತ್ರದ  ಟ್ರೇಲರ್ ಬಿಡುಗಡೆಯಾಗಿದೆ.ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ತಂಡಕ್ಕೆ ಶುಭಶಯ ಕೋರಿದ್ದಾರೆ. ಉದಯ್ ಕುಮಾರ್ ಪಿಎಸ್  ಕಾರ್ಮೋಡ ಸರಿದು  ಚಿತ್ರದ ನಂತರ ಎರಡನೇ ಬಾರಿ ನಿರ್ದೇಶನ ಮಾಡಿರುವ ಚಿತ್ರ ಇದು.

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, ಉದಯ್ ಹೇಳಿದ ಕಥೆ ಇಷ್ಟವಾಯ್ತು. ಹಂಚಿ ತಿನ್ನುವ ಅಗತ್ಯವಿರುವ ಈ ದಿನಗಳಲ್ಲಿ ಹಂಚಿ ಉಣ್ಣದೇ ಬರೀ ಬಾಚಿಕೊಳ್ಳುವ ಮನಸ್ಥಿತಿ, ಅದರಿಂದ ಉಂಟಾಗುವ ಸಾಮಾಜಿಕ ತೊಂದರೆಗಳ ಸುತ್ತ ಕಥೆ ಸಾಗುತ್ತದೆ. ತಮ್ಮದೇ ಟೆಂಟ್ ಸಿನಿಮಾ ಸೂಲ್ಕ್ ಪ್ರತಿಭೆಗಳು ಸೇರಿ ಬನ್ ಟೀ ಚಿತ್ರ ಮಾಡಿದ್ದು, ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ನಿರ್ದೇಶಕ ಉದಯ್ ಮಾತನಾಡಿ,, ಬನ್ ಟೀ ಏಳು ವರ್ಷದ ಕನಸು. ಸಿನಿಮಾ ಅವಕಾಶಕ್ಕಾಗಿ ಗಾಂಧಿನಗರ ಸುತ್ತುವಾಗ ಬನ್ ಟೀ ನಮ್ಮ ಊಟ.. ಟೈಟಲ್ ಡಿಫರೆಂಟಾಗಿದೆ. ಶೀರ್ಷಿಕೆ ವಿಭಿನ್ನವಾಗಿ ಇದ್ದರೇ ಕುತೂಹಲ ಮೂಡುತ್ತದೆ. ಟೈಟಲ್ ಬಗ್ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ ಎಂದರು.

ನೈಜ ಘಟನೆಯಿಂದ ಸ್ಫೂರ್ತಿ ಪಡೆದು ರೂಪಿಸಿರುವ ಬನ್ ಟೀ ಸಿನಿಮಾಗೆ ಉದಯ್ ಕಥೆ ಬರೆದು ನಿರ್ದೇಶನದ ಜೊತೆಗೆ ಸಂಕಲನ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಮೌರ್ಯ, ತನ್ಮಯ್, ಉಮೇಶ್ ಸಕ್ಕರೆನಾಡು, ಶ್ರೀದೇವಿ, ನಿಶಾ, ಗುಂಡಣ್ಣ, ಸುನಿಲ್ ನಟಿಸಿರುವ ಈ ಚಿತ್ರಕ್ಕೆ ರಾಧಾಕೃಷ್ಣ ಬ್ಯಾನರ್ ಆರ್ ಕೇಶವ ನಿರ್ಮಾಣ ಮಾಡಿದ್ದು, ರಾಜರಾವ್ ಅಂಚಲ್ಕರ್ ಕ್ಯಾಮೆರಾ, ಪ್ರದ್ಯೋತನ್ ಸಂಗೀತ ಸಿನಿಮಾಕ್ಕಿದೆ.  ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಬನ್ ಟೀ ಸಿನಿಮಾವನ್ನು ಏಪ್ರಿಲ್ ತಿಂಗಳಾಂತ್ಯಕ್ಕೆ ತೆರೆಗೆ ತರುವ  ಬರುವ ಸಾದ್ಯತೆಗಳಿವೆ.