ಬೆಂಗಳೂರು, ಮಾ. ೨೯- ಮೂರು ತಿಂಗಳ ಮೊದಲೇ ನಾವು ಚುನಾವಣೆಗೆ ರೆಡಿ ಇದ್ದೇವೆ, ಈ ಚುನಾವಣೆಯಲ್ಲಿ ಬಿಜೆಪಿ ೬೦ ರಿಂದ ೬೫ ಸ್ಥಾನ ಅಷ್ಟೇ ಗೆಲ್ಲುತ್ತದೆ. ನಾವು ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಎಷ್ಟು ಬೇಗ ಚುನಾವಣೆ ಆಗುತ್ತದೆಯೋ ಅಷ್ಟು ಕಾಂಗ್ರೆಸ್ಗೆ ಒಳ್ಳೆಯದು, ಮೀಸಲಾತಿ ವಿಚಾರದಲ್ಲಿ ಯಾರಿಗೂ ಸಮಾಧಾನ ಆಗಲ್ಲ. ಕೋರ್ಟ್ಗೆ ಹೋದರೆ ಯಾವುದೂ ನಿಲ್ಲುವುದಿಲ್ಲ, ಬಿಜೆಪಿಯವರು ಮಾಡಿದ ತಪ್ಪನ್ನ ನಾವು ಸರಿ ಮಾಡುತ್ತೇವೆ, ಮನೆ ಆಸ್ತಿನ ಹಂಚಿಕೊಂಡಂಗೆ ಇವರು ಕೊನೆ ಕ್ಷಣದಲ್ಲಿ ಹಂಚಿಕೊಳ್ಳಲು ಹೊರಟಿದ್ದಾರೆ ಎಂದಿದ್ದಾರೆ.ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ‘ಕಾಂಗ್ರೆಸ್ ಪಕ್ಷದ ಗ್ಯಾರಂಟಿ ನಾವು ಉಳಿಸಿಕೊಳ್ಳುತ್ತೇವೆ. ಅವರು ಬೋಗಸ್ಸಾ ನಾವು ಬೋಗಸ್ಸಾ? ಗೊತ್ತಾಗುತ್ತೆ. ಮಹದಾಯಿ ವಿಚಾರದಲ್ಲಿ ಅವಕಾಶವೇ ಕೊಟ್ಟಿಲ್ಲವೆಂದು ಕೇಂದ್ರವೇ ಹೇಳಿದೆ. ಪ್ರಹ್ಲಾದ ಜೋಷಿ ಮಹದಾಯಿ ಆಯ್ತು ಎಂದು ಸಿಹಿ ಹಂಚಿದ್ರಲ್ಲ. ಎಲ್ಲೋಯ್ತು ಅದು? ಎಂದು ಪ್ರಶ್ನಿಸಿದರು.ಇದೇ ಸಂದರ್ಭದಲ್ಲಿ ಜೆಪಿಯವರು ಸಂಪರ್ಕದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಜೆಪಿಯವರು ಅವರೇ ನಮ್ಮನ್ನು ಹುಡುಕಿಕೊಂಡು ಬರುತ್ತಿದ್ದಾರೆ. ನಮಗೇ ಅವರನ್ನೆಲ್ಲ ಅಕಾಮಡೇಟ್ ಮಾಡುವುದಕ್ಕೆ ಆಗುತ್ತಿಲ್ಲ ಎಂದು ಸುಮ್ಮನಿದ್ದೇವೆ ಎಂದರು
ಇದೇ ವೇಳೆ ಅವರು ಹೇಗೆ ಸರ್ಕಾರ ಮಾಡಿದರು ಹಾಗಾದರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ನಮ್ಮ ಕ್ಯಾಂಡಿಡೇಟ್ಗಳನ್ನೆಲ್ಲ ಹೊತ್ತುಕೊಂಡು ಹೋಗಿ ಸರ್ಕಾರ ಮಾಡಿದ್ರಲ್ಲ. ಇದು ಬಿಜೆಪಿ ಸರ್ಕಾರ ಅಲ್ಲ, ಸಮ್ಮಿಶ್ರ ಸರ್ಕಾರ, ಇದು ಜೆಡಿಎಸ್ ಹಾಗೂ ಕಾಂಗ್ರೆಸ್ನವರಿಂದ ನಡೆದ ಸರ್ಕಾರ ತಿಳಿಸಿದರು.