18 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶ

ಮೈಸೂರು: ಮೇ.24:- ಭರ್ಜರಿ ಭೇಟಿ ನಡೆಸಿರುವ ಮೈಸೂರು ಜಿಲ್ಲಾ ಪೆÇಲೀಸರು ಇದೇ ಮೊದಲ ಬಾರಿಗೆ ಕೇರಳ ಮೂಲದಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 18 ಕೋಟಿ ಮೌಲ್ಯದ 9 ಕೆಜಿ 821 ಗ್ರಾಂ ಅಂಬರ್ಗ್ರೀಸ್(ತಿಮಿಂಗಲ ವಾಂತಿ) ವಶಪಡಿಸಿಕೊಂಡಿರುವ ಪೆÇಲೀಸರು ಕೇರಳದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಬರ್ಗ್ರೀಸನ್ನು ಸುಗಂಧ ದ್ರವ್ಯ ಹಾಗೂ ಔಷಧ ತಯಾರಿಕೆಯಲ್ಲಿ ಬಳಕೆ ಮಾಡುವ ಜತೆಗೆ ವಿದೇಶಗಳಲ್ಲಿಯೂ ಹೆಚ್ಚಿನ ಬೇಡಿಕೆಯಿದ್ದು, ಕೋಟ್ಯಂತರ ರೂ ಬೆಲೆ ಬಾಳುತ್ತದೆ. ಎಚ್.ಡಿ.ಕೋಟೆಯ ಹೋಟೆಲೊಂದರಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಇದರ ಸಾಗಾಟಕ್ಕೆ ಯತ್ನ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಹ್ಯಾಂಡ್‍ಪೆÇೀಸ್ಟ್ ಬಳಿ ದಾಳಿ ನಡೆಸಿದ ಹೆಚ್.ಡಿ.ಕೋಟೆ ಹಾಗೂ ಸೆನ್ ಪೆÇಲೀಸರು ಅಂಬರ್ಗ್ರೀಸ್ ಹಾಗೂ ಕಾರಿನ ಸಮೇತ ಕೇರಳದ ಮೂವರನ್ನು ಬಂಧಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸೀಮಾ ಲಡ್ಕರ್, ಆರೋಪಿಗಳು ಅಂಬರ್ಗ್ರೀಸನ್ನು ಬೇರೊಬ್ಬರಿಂದ ಪಡೆದುಕೊಂಡು ಮತ್ತೊಬ್ಬರಿಗೆ ಮಾರಾಟ ಮಾಡಲು ಮುಂದಾಗಿದ್ದರು. ಇದರಲ್ಲಿ ಅಂತಾರಾಷ್ಟ್ರೀಯ ಮಾರಾಟ ಜಾಲ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇದರ ಹಿಂದೆ ಒಂದು ದೊಡ್ಡ ಜಾಲ ಇರುವ ಸಂಬಂಧ ಹೆಚ್ಚಿನ ಮಟ್ಟದ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಸೋಲಿಗೆಕೋರನ ಬಂಧನ:
ಮೇ 19ರಂದು ರವಿ ಎಂಬುವವರ ಆಟೋದಲ್ಲಿ ಇಬ್ಬರು ವ್ಯಕ್ತಿಗಳು ಕಡಕೊಳಕ್ಕೆ ತೆರಳಿದ್ದರು. ಈ ವೇಳೆ ಸ್ನೇಹಿತನನ್ನು ನೋಡಬೇಕೆಂದು ದೇವಲಾಪುರದ ಕಡೆಗೆ ಹೋಗುವಂತೆ ಹೇಳಿ ಮಾರ್ಗ ಮಧ್ಯೆ ಪೂರ್ಣಿಮ ಫಾರಂ ಹೌಸ್ ಬಳಿ ಸ್ನೇಹಿತ ಬರುತ್ತಾನೆಂದು ಆಟೋ ನಿಲ್ಲಿಸಿದ್ದಾರೆ. ಈ ವೇಳೆ ಮೂತ್ರ ವಿಜರ್ಸನೆಗೆಂದು ತೆರಳಿದ ಚಾಲಕ ರವಿಗೆ ಚಾಕು ತೋರಿಸಿ ಆತನ ಬಳಿಯಿದ್ದ 2 ಸಾವಿರ ನಗದು, ಒಂದು ಮೊಬೈಲ್ ಫೆÇೀನ್ ಕಿತ್ತುಕೊಂಡು, ಆತನನ್ನು ಹಳ್ಳಕ್ಕೆ ತಳ್ಳಿ ಆಟೋದೊಂದಿಗೆ ಪರಾರಿಯಾಗಿದ್ದರು. ಈ ಸಂಬಂಧ ಚಾಲಕ ರವಿ ವರುಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ತನಿಖೆ ಕೈಗೊಂಡ ಪೆÇಲೀಸರು ಮೇ 21ರಂದು ಆರೋಪಿಯನ್ನು ಬಂಧಿಸಿ ಆಟೋ, ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈತ ತನ್ನ ಸ್ನೇಹಿತನೊಂದಿಗೆ ಇಲವಾಲ, ಬಿಳಿಗೆರೆ, ಮೈಸೂರು ದಕ್ಷಿಣ ಠಾಣೆಗಳ ವ್ಯಾಪ್ತಿಯಲ್ಲಿ 6 ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ. ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.
ಮೊಬೈಲ್ ಕಳೆದರೆ ದೂರು ಕೊಡಿ
ಅಂದಾಜು 80ಕ್ಕೂ ಹೆಚ್ಚು ಮೊಬೈಲ್ ಫೆÇೀನ್‍ಗಳ ಕಳವು ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಪೆÇಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲಾ ವ್ಯಾಪ್ತಿಯ ಮೊಬೈಲ್ ಪತ್ತೆಗೆ ಆರಂಭಿಸಿರುವ ಸಿಐಆರ್ ಪೆÇೀರ್ಟಲ್‍ನಲ್ಲಿ ಕಳೆದುಹೋಗಿರುವ ಮಾಹಿತಿ ನೋಂದಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಕಳೆದುಹೋಗಿದ್ದ 9 ಲಕ್ಷ ಮೌಲ್ಯದ ವಿವಿಧ ಕಂಪನಿಯ 50 ಮೊಬೈಲ್‍ಗಳನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಇಲ್ಲಿಯವರೆಗೆ ಸುಮಾರು 130 ಮೊಬೈಲ್‍ಗಳನ್ನು ಪತ್ತೆ ಹಚ್ಚಲಾಗಿದೆ. ಸಾರ್ವಜನಿಕರು ಸಹ ಮಾಹಿತಿ ಹಂಚಿಕೊಂಡರೆ ಮೊಬೈಲ್ ಪತ್ತೆಗೆ ಕ್ರಮವಹಿಸುವುದಾಗಿ ಎಸ್‍ಪಿ ಸೀಮಾ ಲಾಟ್ಕರ್ ಹೇಳಿದರು.
ಗೋಷ್ಠಿಯಲ್ಲಿ ಎಎಸ್ಪಿ ಡಾ.ನಂದಿನಿ.ಬಿ.ಎನ್, ಮೈಸೂರು ಗ್ರಾಮಾಂತರ ಉಪವಿಭಾಗದ ಡಿಎಸ್‍ಪಿ ಶಿವಕುಮಾರ್, ಸಿಪಿಐ ಸ್ವರ್ಣ.ಜಿ.ಎಸ್, ಹೆಚ್.ಡಿ.ಕೋಟೆ ಠಾಣೆ ಇನ್ಸ್‍ಪೆಕ್ಟರ್ ಶಬ್ಬೀರ್ ಹುಸೇನ್, ಸೆನ್ ಪೆÇಲೀಸ್ ಠಾಣೆಯ ಪುರುಷೋತ್ತಮ್ ಸೇರಿದಂತೆ ಹಲವರು ಇದ್ದರು.