
ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಸುಳ್ಳು ದೂರು ದಾಖಲಿಸಿ, ಕಾಂಗ್ರೆಸ್ ಏಜೆಂಟ್ ರಂತೆ ವರ್ತಿಸುತ್ತಿರುವ ವಿಜಯ ನಗರ ಎಸಿಸಿ ರವಿರವರನ್ನು ಅಮಾನತು ಮಾಡುವಂತೆ ಒತ್ತಾಯಿ ಬಿಜೆಪಿ ಮಾಜಿ ಪಾಲಿಕೆ ಸದಸ್ಯರುಗಳು ಇಂದು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು. ಮಾಜಿ ಪಾಲಿಕೆ ಸದಸ್ಯರುಗಳಾದ ಹೆಚ್.ರವೀಂದ್ರ, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ಡಾ.ಎಸ್.ರಾಜು, ದಾಸೇಗೌಡ ಹಾಗೂ ಬಿಜೆಪಿ ಮುಖಂಡರುಗಳು ಇದ್ದಾರೆ.