
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರ ಹುನ್ನಾರ ಮಾಡುತ್ತಿದೆ ಎಂದು ಖಂಡಿಸಿ ಬಾಗಲಕೋಟೆಯ ಕಾಂಗ್ರೆಸ್ ಕಾರ್ಯಲಯದಲ್ಲಿ ಇಂದು ಮೌನ ಪ್ರತಿಭಟನೆ ಮಾಡಲಾಯಿತು. ಎಸ್.ಆರ್. ಪಾಟೀಲ, ಅಜಯಕುಮಾರ ಸರನಾಯಕ, ಎಸ್.ಜಿ. ನಂಜಯನಮಠ, ಬಾಯಕ್ಕ ಮೇಟಿ, ರಾಜು ಮನ್ನಿಕೇರಿ, ವೀಣಾ ಕಾಶಪ್ಪನವರ, ರಕ್ಷಿತಾ ಈಟಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.