
ಹುಬ್ಬಳ್ಳಿಯ ಉಣಕಲ್ ಕ್ರಾಸ್ ನಲ್ಲಿರುವ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಾಗದಲ್ಲಿ ಶಿಕ್ಷಕರ ಸಭಾಭವನ ನಿರ್ಮಾಣಕ್ಕಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹುಡಾ ಮಾಜಿ ಅಧ್ಯಕ್ಷ ರಾಜಾ ದೇಸಾಯಿ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್.ಭಟ್, ಶ್ಯಾಮ ಮಲ್ಲನಗೌಡರ, ಬಿ.ಕೆ.ಮಳಗಿ, ಪಟ್ಟಣಶೆಟ್ಟಿ, ಶ್ರೀನಿವಾಸ ವಾಲಿ, ಶಿಕ್ಷಕರ ವೃಂದ ಉಪಸ್ಥಿತರಿದ್ದರು.